88929 25504
 
  • Total Visitors: 3730249
  • Unique Visitors: 305107
  • Registered Users: 35911

Error message

  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Notice: Trying to access array offset on value of type int in element_children() (line 6569 of /home4/devan1ay/public_html/includes/common.inc).
  • Deprecated function: implode(): Passing glue string after array is deprecated. Swap the parameters in drupal_get_feeds() (line 394 of /home4/devan1ay/public_html/includes/common.inc).

ಶ್ರೀ ದೇವರ ದಾಸಿಮಯ್ಯ

 

Courtesy : devaradasimayya.blogspot.com

 

ಶ್ರೀ ದೇವರ ದಾಸಿಮಯ್ಯ-ದೇವಾಂಗ ಜನಾಂಗದ ಕುಲಗುರು ಪ್ರಥಮ ವಚನಕಾರರು

ದೇವರ ದಾಸಿಮಯ್ಯರವರು ದೇವಾಂಗ ಜನಾಂಗದ ಕುಲಗುರುವಾಗಿರುವರು. ಇವರು ವಚನಗಳನ್ನು ರಚಿಸಿರುವ ಆದಿಕಾಲದ ಶರಣರಲ್ಲಿ ಮೊದಲಿಗರಾಗಿರುವರು. ಇವರ ಬಗ್ಗೆ ಯಾವ ಕಡೆಯೂ ಹೆಚ್ಚು ಪ್ರಚಲಿತವಿಲ್ಲ ಆಗಾಗಿ ಇವರ ಬಗ್ಗೆ ಸಾಕಷ್ಟು ವಿಷಯಗಳು ತುಂಬಾ ಆಳವಾಗಿ ತಿಳಿದಿಲ್ಲ. ಕೆಲವು ಕಡೆ ಮಾತ್ರ ಇವರ ಬಗ್ಗೆ ಹಲವು ವಿಚಾರಗಳು ಗಮನಕ್ಕೆ ಬಂದಿದೆ. ಇವರು ಹುಟ್ಟಿದ್ದು ಮುದನೂರು. ಇವರ ಜೀವನದ ಕಸುಬು ಬಟ್ಟೆ ನೇಯುವುದು. ಶಿವನ ಧ್ಯಾನ ಮತ್ತು ಅವರ ಕಾಯಕವೇ ಅವರ ಜೀವನದ ಮೂಲವಾಗಿತ್ತು. ಹೀಗೆ ಬಟ್ಟೆ ನೇಯುತ್ತಾ ತನ್ನ ದಿನನಿತ್ಯದ ಕೆಲಸದಲ್ಲಿ ತೊಡಗಿಕೊಂಡು ವಚನಗಳನ್ನು ಸಾಮಾನ್ಯ ಆಡು ಭಾಷೆಯಲ್ಲಿ ರಚಿಸಿದರು. ಆಗಿನ ಪರಿಸ್ಥಿತಿಯಲ್ಲಿ ಆದ್ಯಾವುದೂ ಅಷ್ಟು ಗಣನೀಯವಾಗಿ ಜನಗಳಿಗೆ ಗೊತ್ತಾಗಲಿಲ್ಲ. ನಂತರ ಬಂದ ಶರಣರು ರಚಿಸಿದ ವಚನಗಳು ಹೆಚ್ಚು ಪ್ರಚಲಿತವಾದವು.
 

 

 

 

ದೇವರ ದಾಸಿಮಯ್ಯನವರ ವಿವರ :

 

ದೇವರ ದಾಸಿಮಯ್ಯರವರು ದೇವಾಂಗ ಜನಾಂಗದ ಕುಲಗುರುವಾಗಿರುವರು. ಇವರು ವಚನಗಳನ್ನು ರಚಿಸಿರುವ ಆದಿಕಾಲದ ಶರಣರಲ್ಲಿ ಮೊದಲಿಗರಾಗಿರುವರು. ಇವರ ಬಗ್ಗೆ ಯಾವ ಕಡೆಯೂ ಹೆಚ್ಚು ಪ್ರಚಲಿತವಿಲ್ಲ ಆಗಾಗಿ ಇವರ ಬಗ್ಗೆ ಸಾಕಷ್ಟು ವಿಷಯಗಳು ತುಂಬಾ ಆಳವಾಗಿ ತಿಳಿದಿಲ್ಲ. ಕೆಲವು ಕಡೆ ಮಾತ್ರ ಇವರ ಬಗ್ಗೆ ಹಲವು ವಿಚಾರಗಳು ಗಮನಕ್ಕೆ ಬಂದಿದೆ. ಇವರು ಹುಟ್ಟಿದ್ದು ಮುದನೂರು. ಇವರ ಜೀವನದ ಕಸುಬು ಬಟ್ಟೆ ನೇಯುವುದು. ಶಿವನ ಧ್ಯಾನ ಮತ್ತು ಅವರ ಕಾಯಕವೇ ಅವರ ಜೀವನದ ಮೂಲವಾಗಿತ್ತು. ಹೀಗೆ ಬಟ್ಟೆ ನೇಯುತ್ತಾ ತನ್ನ ದಿನನಿತ್ಯದ ಕೆಲಸದಲ್ಲಿ ತೊಡಗಿಕೊಂಡು ವಚನಗಳನ್ನು ಸಾಮಾನ್ಯ ಆಡು ಭಾಷೆಯಲ್ಲಿ ರಚಿಸಿದರು. ಆಗಿನ ಪರಿಸ್ಥಿತಿಯಲ್ಲಿ ಆದ್ಯಾವುದೂ ಅಷ್ಟು ಗಣನೀಯವಾಗಿ ಜನಗಳಿಗೆ ಗೊತ್ತಾಗಲಿಲ್ಲ. ನಂತರ ಬಂದ ಶರಣರು ರಚಿಸಿದ ವಚನಗಳು ಹೆಚ್ಚು ಪ್ರಚಲಿತವಾದವು.

 

ನುಡಿಗಳು:

ಉರಿವ ಕೆಂಡದ ಮೇಲೆ ತೃಣವ ತಂದಿರಿಸಿದರೆ
ಆ ತೃಣವನಾ ಕೆಂಡ ನುಂಗಿದಂತೆ,
ಗುರುಚರಣರ ಮೇಲೆ ತನುವೆಂಬ ತೃಣವ ತಂದಿರಿಸಿದರೆ
ಆತನ ಸರ್ವಾಂಗವೆಲ್ಲ ಲಿಂಗ ಕಾಣಾ ರಾಮನಾಥ!

 

 

 

 

 

ವಚನಗಳು :

 

ಕರಸ್ಥಲವೆಂಬ ದಿವ್ಯ ವಿಭೂತಿಯೊಳಗೆ

ಮಹಾಘನಲಿಂಗ ನಿಕ್ಷೇಪವಾಗಿದೆ

ಈ ದಿವ್ಯ ನಿಕ್ಷೇಪವನಾರಾಧಿಸುವಡೆ

ಅಂಜನಸಿದ್ದಿ ಇಲ್ಲವೆ ಸಾಧಿಸಬಾರದು

ಲಿಪಿ ಇಲ್ಲದ ತೆಗೆವರಸದವಳ

ಆ ಲಿಪಿಯ ಪ್ರಮಾಣದ ಷಟ್ ತತ್ವದ ಮೇಲೆ ನಿಶ್ಚಯಿಸಿ

ಆ ನಿಶ್ಚಯದೊಳಗೆ ಈ ನಿಕ್ಷೇಪಕರ್ತೃವಿನ

ಹೆಸರ ತಿಳಿಯಲೋದುವನ್ನಬರ

ಆತ ನಮ್ಮ ಹೆತ್ತಯ್ಯನೆಂಬ ಹೆಸರೊಂದಿತ್ತು

ಆ ಓದಿಕೆಯ ಕಡೆಯಕ್ಕರದೊಳಗೆ

ಅಂಜನಸಿದ್ದಿಯ ಹೇಳಿತ್ತು

ಅದಾವ ಪರಿಕ್ರಮದಂಜನವೆಂದೊಡೆ

ಅದು ನಮ್ಮ ಹೆತ್ತಯ್ಯ ಜಗದ್ವಿಲಾಸ

ತದರ್ಥವಾಗಿ ತನ್ನ ಆ ಮೂಲಶಕ್ತಿ ಸಂಭೂತವಾದಂದು!

ರಾಮನಾಥ

 

 

 

ವಚನಗಳು :

 

ಮುಕ್ಕುವರು ಭಂಗಿಯ ಸಕ್ಕರೆ ಇರಲ್ಕೆ

ಸ್ವಸ್ತ್ರೀ ಇದ್ದಂತೆ ಪರಸ್ತ್ರೀಯರಿಗೆ ಅಳುಪುವರು

ಸತ್ತ ನಾಯ ಭಕ್ಷಿಸುವ ಹಡಕಿಗರನೇನೆಂಬೆನಯ್ಯ ರಾಮನಾಥ ?

 

ಇತ್ತ ಬಾ ಎನ್ನದವನ, ಹತ್ತೆ ಹೊದ್ದಲು ಬೇಡ

ಇತ್ತ ಬಾ ಎಂಬ ಸದ್ಭಕ್ತನ ಮನೆಯ ಬಾಗಿಲು

ಹತ್ತಿಪ್ಪೆ ಕಾಣಾ ರಾಮನಾಥ |

 

ಭಕ್ತರ ಮಠವೆಂದು ಭಕ್ತ ಹೋದಡೆ

ಆ ಭಕ್ತ ಭಕ್ತಂಗೆ ಅಡಿ ಇಟ್ಟು ಇದಿರೆದ್ದು ನಡೆದು

ಹೊಡೆಗೆಡೆದು ಒಡಗೊಂದು ಬಂದು

ವಿಭೂತಿ ವೀಳೆಯವನಿಕ್ಕಿ ಪಾದಾರ್ಚನೆಯ ಮಾಡಿ

ಸಮಯವನರಿತು ಲಿಂಗಾರ್ಚನೆಯ ಮಾಡಿಸಿ

ಒಕ್ಕುದ ಕೊಂಡು ಓಲಾಡುತಿಪ್ಪುದೆ ಭಕ್ತಿ

ಹೀಗಲ್ಲದೆ ಬೆಬ್ಬನೆ ಬೆರೆತು, ಬಿಬ್ಬನೆ ಬೀಗಿ

ಅಹಂಕಾರಿಭರಿತನಾಗಿಪ್ಪವನ ಮನೆಯ

ಲಿಂಗಸನುಮತರು ಹೊಗರು ಕಾಣಾ ರಾಮನಾಥ !

 

ಗುರು ನಿರೂಪವ ಮಾಡರು

ಪರವಧುವ ನೆರವರು, ಪರಧನವನಳುಪುವರು

ಗುರುವಿಲ್ಲವವರಿಗೆ; ಪರವಿಲ್ಲವವರಿಗೆ,

ಇಂತಪ್ಪ ನರಕಿಗಳನೆನಗೊಮ್ಮೆ ತೋರದಿರಾ ರಾಮನಾಥ !

 

ಒಡೆಯರನೊಡಗೊಡು ಬಂದು

ಕೈಗಡಿಗೆಯ ನೀರ ಕೈಯಲ್ಲಿ ಕೊಟ್ಟು

ಒಡೆಯರೇ ಕಾಲ ತೊಳಕೋ ಎಂಬವರ

ಮನೆಗೆ ಅಡಿ ಇಡಲಾಗದಯ್ಯ ಮೃಡಶರಣರು!

ಒಡಲಿಚ್ಛೆಗೆ ಬಡಮನವ ಮಾಡಿ,

ಹೊಕ್ಕುಂಬವರ ಎನಗೊಮ್ಮೆ ತೋರದಿರಾ ರಾಮನಾಥ !

ಅಡಗ ತಿಂಬರು ಕಣಕದಡಿಗೆ ಇರಲ್ಕೆ

ಸುರೆಯ ಕುಡಿವರು ಹಾಲಿರಲ್ಕೆ

 

ದೇವರ ದಾಸಿಮಯ್ಯರ ಜೀವನ ಚರಿತ್ರೆ : 

 

ದೇವಾಂಗ ಜನಾಂಗದಲ್ಲಿ ಮೊಟ್ಟ ಮೊದಲು ಪ್ರಸಿದ್ಧವಾದವರು ದೇವರ ದಾಸಿಮಯ್ಯ.

ಸೀರೆ ನೇಯುವ ಕೆಲಸದಿಂದ ಜೀವನ ಸಾಗಿಸುತ್ತಿದ್ದ ಇವರು ರಾಮನಾಥ ಎನ್ನುವ ನಾಮಂಕಿತವನ್ನು ಕೊಟ್ಟು ಅನೇಕ ವಚನಗಳನ್ನು ರಚಿಸಿದ್ದಾರೆ.

ತುಂಬಾ ಉಪಯುಕ್ತ ಮತ್ತು ತಮ್ಮ ದಿನನಿತ್ಯದ ಜೀವನಕ್ಕೆ ಸಂಭಂದಿಸಿದ ವಿಷಯಗಳ ಬಗ್ಗೆಯೆ ರಚಿಸಿದ ದೇವರ ದಾಸಿಮಯ್ಯ ಅವರ ವಚನಗಳು ತುಂಬಾ ಸರಳವಾಗಿ ಮನೆಸೂರೆಗೊಳ್ಳುತ್ತವೆ.

ಇವರು ದೇವಾಂಗ/ ದೇವ ಬ್ರಾಹ್ಮಣ ದವರಿಗೆ ಕುಲಗುರುವಾಗಿರುತ್ತಾರೆ, ಇದನ್ನು ಈಗಿನ ಎಲ್ಲಾ ದೇವಾಂಗ ಜನಾಂಗದವರು ತಮ್ಮ ಪೀಳಿಗೆಗಳಿಗೆ ತಿಳಿಸಿ ಹೇಳಬೇಕು. ಅವರ ಬಗ್ಗೆ ತಿಳಿಸಕೊಡಬೇಕು.

ಅನೇಕ ಪವಾಡಗಳನ್ನು ಮಾಡಿದ ಇವರು, ಪವಾಡವೊಂದೆ ಅಲ್ಲ, ಮನುಷ್ಯನ/ನಮ್ಮ ಜೀವನದಲ್ಲಿ ದೇವರ ಸ್ಮರಣೆಯೂ ಹಾಗೂ ಜೀವನದಲ್ಲಿ ಸಾಧನೆಯೂ ಅಷ್ಟೇ ಪ್ರಮುಖವೆಂದು ನಂಬಿ ಭಕ್ತಿ ಸಾಧನೆಯಲ್ಲಿಯೇ ಬಹಳ ಹೆಸರನ್ನು ಪಡೆದವರು, ಒಂದು ರೀತಿಯಲ್ಲಿ ಎಲ್ಲರಿಗೂ ಶಿಕ್ಷಕರಾಗಿದ್ದರು. ಅನೇಕ ಮಹಾನ್ ವ್ಯಕ್ತಿಗಳನ್ನು ತಮ್ಮ ಭಕ್ತಿಯ ವಾದದಿಂದ ಸೋಲಿಸಿ, ಆಗಿನ ಕಾಲದಲ್ಲಿಯೇ ಪ್ರಸಿದ್ಧಿ ಪಡೆದು ಹೆಸರಾದವರು. ಶಿವನ ದರ್ಶನದಿಂದ ವರವನ್ನು ಪಡೆದ ಇವರು ಸರಳ, ಸಜ್ಜನಿಕೆಯ ಸ್ವಭಾವದವರಾಗಿದ್ದು, ಎಲ್ಲರಲ್ಲಿಯೂ ಭಕ್ತಿಯ ಸಿಂಚನವನ್ನು ಸಿಂಪಡಿಸಿದರು. ಇವರ ಪತ್ನಿ ದುಗ್ಗಳೆಯೂ ಸಹ ಸತಿ ಶಿರೋಮಣಿಯಾಗಿ ಮಹಾ ಪ್ರತಿವ್ರತೆಯಾಗಿದ್ದು ತಮ್ಮ ಗಂಡನ ಜೊತೆಯಲ್ಲಿ ಆಕೆ ಕೂಡ ಭಕ್ತಿಯಲ್ಲಿ,ಸಂಸಾರದಲ್ಲಿ ಹೆಸರು ಮಾಡಿದವರು. ಇವರುಗಳ ಬಗ್ಗೆ ಹೆಚ್ಚಿಗೆ ಎಲ್ಲೂ ಪ್ರಚಾರಗಳಾಗಲಿ, ಪುಸ್ತಕಗಳಾಗಲಿ ಜಾಸ್ತಿ ಪ್ರಚಲಿತದಲ್ಲಿ ಇಲ್ಲದಿರುವುದೇ ನಮ್ಮ ದುರಾದೃಷ್ಠ. ಆಗಾಗಿ ಹೆಚ್ಚು ಬೆಳಕಿಗೆ ಬರಲಿಲ್ಲ, ಇವರ ಬಗ್ಗೆ ತಿಳಿದುಕೊಳ್ಳಲು. ಮುಂದಾದರು ಇಂತಹ ಮಹಾಸಾಧ್ವಿಗಳು ನಮ್ಮ ನಾಡಲ್ಲಿ ಇದ್ದರು ಎನ್ನುವುದಕ್ಕೆ ಕುರುಹುಗಳನ್ನು ಉಳಿಸುವುದು ನಮ್ಮ ಕರ್ತವ್ಯವಾಗಿದೆ. ಇತಿಹಾಸದಲ್ಲಿ,ಪುರಾಣದಲ್ಲಿ ಇವರ ಬಗ್ಗೆ ತಿಳಿಯಲು ಎಲ್ಲರು ಶ್ರಮಿಸಬೇಕು. ದೇವರ ದಾಸಿಮಯ್ಯನವರು ಶತ-ಶತಮಾನಗಳಿಂದ ಬಂದಂತಹ ದಕ್ಷಿಣ ಭಾರತದಲ್ಲಿ ಹೆಸರಾದ ಪ್ರಸಿದ್ಧ ಶರಣರಿಗಿಂತಲೂ, ಮೊದಲು ಬಂದಂತಹ ಮೊಟ್ಟ ಮೊದಲ ವಚನಕಾರರಾಗಿದ್ದಾರೆ. ಇವರೇ ವಚನಗಳಿಗೆ ತಳಹದಿ ನೀಡಿದವರು. ವಚನಗಳನ್ನು ತಮ್ಮ ಸಾಮಾಜಿಕ ಜೀವನದಲ್ಲಿಯೇ ಕಂಡುಕೊಂಡು ರಚಿಸಿದರು. ಸೀರೆ ನೇಯುತ್ತಾ ತಮ್ಮ ಪ್ರಾಪಂಚಿಕ ಜೀವನದಲ್ಲಿ ಸಂಸಾರ ಸಾಗಿಸುತ್ತಾ, ಭಕ್ತಿ ಮಾರ್ಗವೇ ಉನ್ನತ ಎಂದು ಸಾರಿದವರು.

                           

 

 

 

 

ಕರಸ್ಥಲದ ಜ್ಯೋತಿಯದು,ಕರುವಿಟ್ಟೆರದವದು

ಅದರ ನೆಲೆಯ ತಿಳಿದರೆ ನಿಜಾನಂದವಿಹುದು

ಹೊಲಬುದೋರದಿಹ ನಿಸ್ಸೀಮನ

ಹೊಲಬನರಿದು ಕೂಡಿದಾತನ ಮೃಡನು ಕಾಣಾ ರಾಮನಾಥ |

 

ಅಡಗನೊಳಗೆ ಹಾಲು ಅಡಗಿಪ್ಪ ಭೇದವನು

ಹಾಲೊಳಗೆ ತುಪ್ಪದ ಕಂಪು ಅಡಗಿಪ್ಪ ಪರಿಯನು

ಎಲೆ ಮೃಡನೆ, ನೀನು ಪ್ರಾಣಪ್ರಕೃತಿಯೊಳಡಗಿಹ ಭೇದವನು

ಲೋಕದ ಜಡರೆತ್ತ ಬಲ್ಲ ರೈ ರಾಮನಾಥ |

 

ಮಾಡಿದ ಕರ್ಮವ ನೋಡಯ್ಯ!

ಎನ್ನ ಮನದಣಿವನ್ನಕ್ಕ ಬೇಡೆನ್ನನು, ಮಾರ್ಕೊಳ್ಳೆನ್ನನು

ಮೇಲೆ ರೂಢಿಗೀಶ್ವರನ ಕೂಡುವೆನು

ನೀರಡಿಸಿದವನಂತೆ ರಾಮನಾಥ |

 

ಸರ್ಪನು ಕೂರ್ಮನು ದಿಕ್ಕರಿಗಳೆಂಟು

ಭೂಮಿಯ ಹೊತ್ತಿಹರೆಂಬುದು ಅಹರ್ನಿಶ

ಹೊತ್ತಿಪ್ಪವರಿಗೆ ಅತ್ತಲಾಧಾರವೇನು, ಇತ್ತಲಾಧಾರವೇನು?

ಉತ್ತರಗೊಡುವವರಿಗೆ ಇಕ್ಕುವೆ ಮುಂಡಿಗೆಯ

ಎತ್ತುವರುಳ್ಳರೆ ತೋರಿರೈ ರಾಮನಾಥನಲಿ |

 

ಗಂಡನುಳ್ಳಮ್ಮನ ಗೌರಿ ಎಂದು ಕಂಡಡೆ,

ಭೂಮಂಡಲಕ್ಕೆ ಅರಸಾಗಿ ಪುಟ್ಟುವನಾತನು

ಗಂಡನ್ನುಳ್ಳಮ್ಮನ ಒಡೆವೆರೆದಾತೆ

ನರಕದಲ್ಲಿ ದಿಂಡುಗೆಡೆದಿಪ್ಪನೈ ರಾಮನಾಥ ?

 

ದೇವರ ದಾಸಿಮಯ್ಯರ ಜೀವನ : 

 

ಗುಲ್ಬರ್ಗಾ ಜಿಲ್ಲೆಯಲ್ಲಿರುವ ಸುರಪುರ ತಾಲ್ಲೂಕಿನ ಮುದನೂರು ಎಂಬ ಊರಿನಲ್ಲಿ ದೇವರ ದಾಸಿಮಯ್ಯನವರು ಜನಿಸಿದರು. ಈ ಊರಿನಲ್ಲಿ ಸುಮಾರು ದೇವರ ದೇವಾಲಯಗಳು ಇದೆ. ಎಲ್ಲಾ ಪಂಥಗಳ ದೇವಸ್ಥಾನಗಳನ್ನು ಹೊಂದಿದ ಕ್ಷೇತ್ರವಿದು. ಎಲ್ಲಕ್ಕಿಂತ ರಾಮನಾಥ ಎನ್ನುವ ದೇವರ ಮೇಲೆ ಹೆಚ್ಚಿನ ಪ್ರೀತಿ ದೇವರ ದಾಸಿಮಯ್ಯನವರಿಗೆ. ಈಗಾಗಿ ತಮ್ಮ ವಚನಗಳಿಗೆ "ರಾಮನಾಥ" ಎನ್ನುವ ನಾಮಾಂಕಿತವನ್ನು ನೀಡಿದ್ದಾರೆ. ಇವರು ನೇಯ್ಗೆ ವೃತ್ತಿಯಿಂದ ತಮ್ಮ ಜೀವನವನ್ನು ಸಾಗಿಸುತ್ತಿದ್ದರು. 10ನೇ ಶತಮಾನದಲ್ಲಿ ಬರುವ ಇವರು ಮೊಟ್ಟ ಮೊದಲ ವಚನಕಾರರಾಗಿದ್ದಾರೆ. ಇವರ ಪತ್ನಿ ದುಗ್ಗಳೆ. ಇಬ್ಬರದೂ ಅನ್ಯೋನ್ಯವಾದ ದಾಂಪತ್ಯ ಜೀವನ. ದೇವರನ್ನು ಒಲಿಸಲು ಮತ್ತು ಮುಕ್ತಿಯನ್ನು ಪಡೆಯಲು ಸನ್ಯಾಸಿಯ ಜೀವನ ಮಾಡಬೇಕಿಲ್ಲ, ವಿವಾಹ ಜೀವನದಲ್ಲಿಯೂ ಮೋಕ್ಷವನ್ನು ಪಡೆಯಬಹುದು ಮತ್ತು ಶಿವನ ಸಾಕ್ಷಾತ್ಕಾರವನ್ನು ಪಡೆಯಬಹುದೆಂದು ನಿರೂಪಿಸಿದವರು.

 

 

  • ದೇವರ ದಾಸಿಮಯ್ಯನವರು ರಚಿಸಿದ ವಚನಗಳು:

     

    ಅಚ್ಚ ಶಿವಭಕ್ತಂಗೆ ಹೊತ್ತಾರೆ ಅಮವಾಸೆ

    ಮಟಮಧ್ಯಾಹ್ನ ಸಂಕ್ರಾಂತಿ;

    ಮತ್ತೆ ಅಸ್ತಮಾನ ಪೌರ್ಣಮಿ ಹುಣ್ಣಿಮೆ;

    ಭಕ್ತನ ಮನೆಯ ಅಂಗಳವೆ ವಾರಣಾಸಿ ಕಾಣಾ!

    ರಾಮನಾಥ ||

     

  • ದೇವಾಂಗ ಜನಾಂಗದಲ್ಲಿ ಮೊಟ್ಟ ಮೊದಲು ಪ್ರಸಿದ್ಧರಾದವರು ದೇವರ ದಾಸಿಮಯ್ಯ.

    ಸೀರೆ ನೇಯುವ ಕೆಲಸದಿಂದ ಜೀವನ ಸಾಗಿಸುತ್ತಿದ್ದ ಇವರು "ರಾಮನಾಥ "ಎನ್ನುವ ನಾಮಂಕಿತವನ್ನು ಕೊಟ್ಟು ಅನೇಕ ವಚನಗಳನ್ನು ರಚಿಸಿದ್ದಾರೆ.

    ತುಂಬಾ ಉಪಯುಕ್ತ ಮತ್ತು ತಮ್ಮ ದಿನನಿತ್ಯದ ಜೀವನಕ್ಕೆ ಸಂಭಂದಿಸಿದ ವಿಷಯಗಳ ಬಗ್ಗೆಯೆ ರಚಿಸಿದ ದೇವರ ದಾಸಿಮಯ್ಯ ಅವರ ವಚನಗಳು ತುಂಬಾ ಸರಳವಾಗಿ ಮನೆಸೂರೆಗೊಳ್ಳುತ್ತವೆ.

    ದೇವರ ದಾಸಿಮಯ್ಯನವರು ರಚಿಸಿದ ವಚನಗಳು:

     

    ಶಿವಭಕ್ತರು ತಮ್ಮ ನಿಜ ಕೈಲಾಸಕ್ಕೆ ಹೋದರೆ

    ಅವರರಸಿಯ ಪಾರ್ವತಿಯ ಸರಿ ಎಂದು ಕಾಣಬೇಕು

    ಅಲ್ಲಿ ಅನುಸರಣೆಯ ಕೊಟ್ಟು ಬೆರೆಸಿ ಮಾತಾಡುವ ನರಕಿಗಳನೇನೆಂಬೆ

    ರಾಮನಾಥ?

 

 

 

 

Image: 
Categories: 
Share Share
Scroll to Top